¶ ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.
TSK
TSK · ಜೆಕರ್ಯ 1:5
مراجع Treasury of Scripture Knowledge في ಕನ್ನಡ IRV.
¶ ಎಲೀಷನು ಮರಣ ಹೊಂದಲು, ಅವನ ಶವವನ್ನು ಅವರು ಸಮಾಧಿಮಾಡಿದರು. ಮೋವಾಬ್ಯರು ಪ್ರತಿ ವರ್ಷದ ಪ್ರಾರಂಭದಲ್ಲಿ ಸುಲಿಗೆ ಮಾಡುವುದಕ್ಕೋಸ್ಕರ ಗುಂಪು ಗುಂಪಾಗಿ ಬರುತ್ತಿದ್ದರು.
ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.
¶ ಇವೆಲ್ಲವುಗಳನ್ನು ನನ್ನ ಮನಸ್ಸಿನಲ್ಲಿ ವಿಚಾರಿಸಿಕೊಂಡು ಒಂದು ತೀರ್ಮಾನಕ್ಕೆ ಬಂದೆನು. ಅದೇನೆಂದರೆ ನೀತಿವಂತನ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಯಾವ ಮನುಷ್ಯನೂ ತನ್ನ ಮುಂದಿರುವ ಪ್ರೀತಿಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.
¶ “ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.
ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,