ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.
TSK
TSK · ಜೆಕರ್ಯ 3:4
مراجع Treasury of Scripture Knowledge في ಕನ್ನಡ IRV.
ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.
ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,
ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.
ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.
ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.
¶ ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.
ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು. ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಒಂದೇ ದಿನದೊಳಗೆ ಈ ದೇಶದ ಪಾಪವನ್ನು ಪರಿಹರಿಸುವೆನು.’
‹ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,›
ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
¶ ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.
ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.
¶ ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.
ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ” ಎಂದು ಹೇಳಿತು.