ಆಗ ಪುನಃ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು” ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ.
TSK
TSK · ಜೆಕರ್ಯ 6:5
مراجع Treasury of Scripture Knowledge في ಕನ್ನಡ IRV.
ಅದಕ್ಕೆ ಮಿಕಾಯೆಹುವು, “ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತಿದ್ದನ್ನೂ ಕಂಡೆನು.
¶ ದೇವದೂತರು ಇನ್ನೊಂದು ದಿನ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ಸೈತಾನನೂ ಅವರ ಸಂಗಡ ಬಂದು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡನು.
ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.
ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳು, ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯು,
ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ಆಕಾರಗಳು ಕಂಡುಬಂದವು; ಅವುಗಳ ರೂಪವು ಮನುಷ್ಯನ ರೂಪದಂತಿತ್ತು.
¶ ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು, ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು.
ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು, “ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು.
¶ ಕೂಡಲೆ ಸುಗಂಧವೃಕ್ಷಗಳ ನಡುವೆ ನಿಂತಿದ್ದವನು, “ಇವರು ಲೋಕಸಂಚಾರಾರ್ಥವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟನು.
ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಆ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವ ಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ” ಎಂದು ಹೇಳಿದನು.
‹ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.›
¶ ದೇವದೂತರ ವಿಷಯದಲ್ಲಿ, “ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ.
¶ ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು.