TSK

TSK · ಜೆಕರ್ಯ 7:10

مراجع Treasury of Scripture Knowledge في ಕನ್ನಡ IRV.

العودة إلى المقطع

ಪರದೇಶದವನಿಗೆ ಅನ್ಯಾಯ ಮಾಡಬಾರದು ಉಪದ್ರವ ಕೊಡಬಾರದು ನೀವು ಐಗುಪ್ತ ದೇಶದಲ್ಲಿ ಪರದೇಶಿಗಳಾಗಿದ್ದೀರಲ್ಲವೇ?

¶ ನೀವು ಸ್ವದೇಶದವರಲ್ಲಿಯಾಗಲಿ ಅಥವಾ ನಿಮ್ಮಲ್ಲಿರುವ ಅನ್ಯದೇಶದವರಲ್ಲಿಯಾಗಲಿ ಗತಿಯಿಲ್ಲದ ಬಡ ಕೂಲಿಯವನಿಗೆ

ಅವರು ತಂತ್ರೋಪಾಯಗಳನ್ನು ಕಲ್ಪಿಸಿ, ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ.

ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.

ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು, ಅವನು ನಿನ್ನ ಪಕ್ಕದಲ್ಲಿ ನಂಬಿಕೆಯಿಂದ ವಾಸಮಾಡುತ್ತಾನಲ್ಲವೇ?

ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ.

ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,

ಕೊಬ್ಬಿ ಢಾಂಭಿಕರಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು.

ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.

ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ.

ಸಾಮಾನ್ಯ ಜನರನ್ನು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ, ವಿದೇಶಿಗಳನ್ನು ಅನ್ಯಾಯಕ್ಕೆ ಒಳಪಡಿಸಿದ್ದಾರೆ.

ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.

¶ ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ?

ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.”

¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.›

ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.

ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.