TSK

TSK · ಜೆಕರ್ಯ 7:5

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಕಸ್ದೀಯರನ್ನೂ ಸಂಹರಿಸಿದನು.

“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.

ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.

¶ ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು,

ನೀವು ಭೋಜನ ಮಾಡುವಾಗಲೂ, ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವುಗಳಾಗಿಯೇ ಇರುವುದಲ್ಲವೇ.

‹ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.›

¶ ‹“ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

‹ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ›‹ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.›

ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.

ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು.