¶ “‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.
TSK
TSK · ಜೆಕರ್ಯ 7:9
مراجع Treasury of Scripture Knowledge في ಕನ್ನಡ IRV.
ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.
¶ ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.
“ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.
ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.
ನೀವು ನಿಮ್ಮ ನಡತೆಯನ್ನು ಮತ್ತು ಕೃತ್ಯಗಳನ್ನು ಸಂಪೂರ್ಣವಾಗಿ ತಿದ್ದಿಕೊಂಡು ಕಕ್ಷಿ ಪ್ರತಿಕಕ್ಷಿಗಳಿಗೆ ಕೇವಲ ನ್ಯಾಯವನ್ನೇ ತೀರಿಸಿರಿ.
ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.
ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.
ಅದರ ಬದಲಾಗಿ ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಹರಿಯಲಿ.
ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ, ನೆಮ್ಮದಿಯಾಗಿಯೂ ಇದ್ದು, ದಕ್ಷಿಣ ಪ್ರಾಂತ್ಯದಲ್ಲಿಯೂ, ಪೂರ್ವದ ಇಳಕಲಿನ ಪ್ರದೇಶದಲ್ಲಿಯೂ ಜನರು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಿಲ್ಲವೇ?’”
‹ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.›
ಅವನು ಅವರಿಗೆ “ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ಅವನ ವಿಷಯವಾಗಿ ಖಂಡನೆ ಮಾಡುವುದುಂಟೇ?” ಎಂದು ಹೇಳಿದ್ದಕ್ಕೆ,