ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.
TSK
TSK · ಜೆಕರ್ಯ 8:13
مراجع Treasury of Scripture Knowledge في ಕನ್ನಡ IRV.
ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ.
ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,
ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ‘ಇಸ್ರಾಯೇಲರು’ ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು.
ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.
ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ; ನಾಚಿಕೆಯು ನನ್ನ ಮುಖವನ್ನು ಮುಚ್ಚಿದೆ.
ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.
¶ ಆ ದಿನದಲ್ಲಿ, ಇಸ್ರಾಯೇಲರು ಐಗುಪ್ತ, ಅಶ್ಶೂರಗಳೊಂದಿಗೆ ಮೂರನೆಯದಾಗಿ ಬೆರೆತು ಲೋಕದ ಮಧ್ಯದಲ್ಲಿ ಆಶೀರ್ವಾದ ನಿಧಿಯಾಗಿರುವುದು.
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.
ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.
ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ. ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ, ಇದು ಯೆಹೋವನ ನುಡಿ.
ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.’”
ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.
ಅವರನ್ನು ನೋಡುವವರು, “ತೊಲಗಿರಿ, ಅಶುದ್ಧರು ನೀವು, ತೊಲಗಿರಿ, ತೊಲಗಿರಿ, ಮುಟ್ಟಬೇಡಿರಿ” ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು, “ಇವರು ಇನ್ನು ಇಲ್ಲಿ ವಾಸಿಸಬಾರದು” ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ.
ನಾನು ಅವರನ್ನೂ, ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯು ಆಗುವುದು.
“ನರಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು, ಅದರಲ್ಲಿ ಯೆಹೂದದ್ದು ಮತ್ತು ಯೆಹೂದಕ್ಕೆ ಸೇರಿದ ಇಸ್ರಾಯೇಲರದು ಎಂದು ಬರೆದು, ಇನ್ನೊಂದು ಕೋಲನ್ನು ತೆಗೆದುಕೊಂಡು ಅದರಲ್ಲಿ ಯೋಸೇಫಿನದು, ಎಫ್ರಾಯೀಮಿನದು, ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲರದು ಎಂದು ಬರೆ.
ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.
ಆ ಕಾಲದಲ್ಲಿ ನಿಮ್ಮನ್ನು ಕರೆದು ತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು. ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೇ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿ ಸ್ತೋತ್ರಗಳಿಗೆ ಗುರಿಮಾಡುವೆನು” ಇದು ಯೆಹೋವನ ನುಡಿ.
ವಿವರಿಸುವ ದೂತನನ್ನು ಕುರಿತು, “ಇವು ಏನು?” ಎಂದು ನಾನು ಕೇಳಿದ್ದಕ್ಕೆ ಅವನು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನು ಚದುರಿಸುವ ಕೊಂಬುಗಳು” ಎಂದು ಉತ್ತರಕೊಟ್ಟನು.
¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;
¶ ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫನ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವುದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟಿದ್ದು ಇಲ್ಲದಂತಾಗುವುದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸಿ ಸದುತ್ತರವನ್ನು ನೀಡುವೆನು.
¶ ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆಲ್ಲ ಸಿಗುವಂತೆಯೂ ಮತ್ತು ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂಡುಕೊಂಡನು.