¶ ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,
TSK
TSK · ಜೆಕರ್ಯ 8:16
مراجع Treasury of Scripture Knowledge في ಕನ್ನಡ IRV.
ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.
ಸತ್ಯವನ್ನಾಡುವವನು ನ್ಯಾಯವನ್ನು ತೋರ್ಪಡಿಸುವನು, ಸುಳ್ಳುಸಾಕ್ಷಿಯು ಅಸತ್ಯವನ್ನು ನುಡಿಯುವನು.
ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.
ಇಸ್ರಾಯೇಲರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದ ಹಾಕಿದ್ದಾನೆ. ಏಕೆಂದರೆ ಪ್ರೀತಿ, ಸತ್ಯ, ದೇವಜ್ಞಾನಗಳು ದೇಶದಲ್ಲಿಲ್ಲ.
ಅದರ ಬದಲಾಗಿ ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಹರಿಯಲಿ.
ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು. ಅದರ ನಿವಾಸಿಗಳು ಸುಳ್ಳುಗಾರರು. ಅವರ ಬಾಯನಾಲಿಗೆಯು ಮೋಸಕರ.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.’”
ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಲ್ಲವೇ’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.
¶ ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.
¶ ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.