ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು.
TSK
TSK · ಜೆಕರ್ಯ 9:4
مراجع Treasury of Scripture Knowledge في ಕನ್ನಡ IRV.
¶ ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
ಇವರು ನಿನ್ನ ವಿಷಯದಲ್ಲಿ ಗೋಳಾಟವನ್ನೆತಿ, ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರದ ಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದವು!
“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.
¶ “‘ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದೆ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಅಪವಿತ್ರನೆಂದು ತಳ್ಳಿಬಿಟ್ಟೆನು; ಹೌದು, ನೆರಳು ನೀಡುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು, ಯೆಹೂದ್ಯರಿಗೆ ಮಾರುವೆನು. ಅವರು ಆ ಮಕ್ಕಳನ್ನು ದೂರದ ಜನಾಂಗವಾದ, ಶೆಬದವರಿಗೆ ಮಾರಿಬಿಡುವರು. ಯೆಹೋವನೇ ಇದನ್ನು ನುಡಿದಿದ್ದಾನೆ.