TSK

TSK · ಚೆಫನ್ಯ 2:3

مراجع Treasury of Scripture Knowledge في ಕನ್ನಡ IRV.

العودة إلى المقطع

ಎರಡೆರಡು ತಮ್ಮ ತಮ್ಮ ಜಾತಿಗನುಸಾರವಾಗಿ ನೋಹನ ಬಳಿಗೆ ಬಂದು ನಾವೆಯಲ್ಲಿ ಸೇರಿದವು.

ದಾವೀದನು ಅವರಿಗೆ, “ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸ ಮಾಡಿದೆನು, ಅತ್ತೆನು.

ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.

ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗುಪ್ತಸ್ಥಳದಲ್ಲಿ ಅಡಗಿಸುತ್ತೀ.

ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.

ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.

ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.

ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.

ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.

ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.

ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳೆದುಕೊಂಡು ಹೋಗುವಿ; ಇದು ಯೆಹೋವನ ನುಡಿ’” ಎಂಬುದೇ.

ಯೆಹೋವನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿ ಗೋಡೆಯ ಒಡಕುಗಳನ್ನೇರಲಿಲ್ಲ, ಇಸ್ರಾಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಭದ್ರ ಮಾಡಲೂ ಇಲ್ಲ. ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ,

ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.

ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ: “ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ!

ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.

‹ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು.›

ಸಹೋದರರೇ, ನಾನಂತೂ ಪಡೆದುಕೊಂಡವನೆಂದು ನನ್ನನ್ನು ಈ ವರೆಗೂ ಎಣಿಸಿಕೊಳ್ಳುವುದಿಲ್ಲ. ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವುದಕ್ಕಾಗಿ ಎದೆಬೊಗ್ಗಿದವನಾಗಿ,

¶ ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.

ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.

ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.