ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಅಶ್ಶೂರಿನ ಅರಸನಾದ ಸನ್ಹೇರೀಬನನ್ನು ಕುರಿತು ನೀನು ನನಗೆ ಪ್ರಾರ್ಥನೆ ಮಾಡಿದ್ದನ್ನು ನಾನು ಕೇಳಿ ದ್ದೇನೆ. ಕರ್ತನು ಅವನನ್ನು ಕುರಿತು ಹೇಳಿದ ವಾಕ್ಯ ವೇನಂದರೆ--
TSK
TSK · 2 ಪೂರ್ವಕಾಲವೃತ್ತಾ 32:21
مراجع Treasury of Scripture Knowledge في Kannada KJV.
ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.
ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.
ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು.
ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ.
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,