TSK

TSK · 2 ಪೂರ್ವಕಾಲವೃತ್ತಾ 34:21

مراجع Treasury of Scripture Knowledge في Kannada KJV.

العودة إلى المقطع

ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.

ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.

ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ

ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.

ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.

ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು.

ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.

ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್‌, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು.

ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.

ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.

ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.

ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;