TSK

TSK · ಅಪೊಸ್ತಲರ ಕೃತ್ಯಗ 13:39

مراجع Treasury of Scripture Knowledge في Kannada KJV.

العودة إلى المقطع

ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.

ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.

ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.

ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.

ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.

ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.

ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.

ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.

ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.

ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.

ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.

ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.

ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.

ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ

ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.

ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು.

ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.

ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.

ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.