ಕರ್ತನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವನು.
TSK
TSK · ಅಪೊಸ್ತಲರ ಕೃತ್ಯಗ 2:39
مراجع Treasury of Scripture Knowledge في Kannada KJV.
ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.
ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?
ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ.
ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ.
ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.
ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.