ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.
TSK
TSK · ಅಪೊಸ್ತಲರ ಕೃತ್ಯಗ 21:40
مراجع Treasury of Scripture Knowledge في Kannada KJV.
ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.
ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.
ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು.
ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.
ಅವನು ಮೆಟ್ಟಲುಗಳ ಮೇಲೆ ಬಂದಾಗ ಜನರ ಬಲಾತ್ಕಾರದ ನಿಮಿತ್ತ ಸೈನಿಕರು ಅವನನ್ನು ಹೊತ್ತು ಕೊಂಡು ಹೋದರು.
ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು.
ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು.