TSK

TSK · ದಾನಿಯೇಲನು 2:44

مراجع Treasury of Scripture Knowledge في Kannada KJV.

العودة إلى المقطع

ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.

ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.

ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.

ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ.

ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.

ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು.

ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,

ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.

ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.

ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ.

ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.

ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.

ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.

ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;

ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.

ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ

ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.