ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು.
TSK
TSK · ದಾನಿಯೇಲನು 2:48
مراجع Treasury of Scripture Knowledge في Kannada KJV.
ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಹೇಳಿ ದ್ದೇನಂದರೆ--ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ--ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವದೂ ಅಡ್ಡಿಮಾಡಬಾರದು.
ಇಸ್ರಾಯೇಲ್ ಮನು ಷ್ಯರು--ಏರಿ ಬಂದ ಈ ಮನುಷ್ಯನನ್ನು ನೋಡಿ ದಿರೋ? ಇಸ್ರಾಯೇಲನ್ನು ಹೀಯಾಳಿಸಲು ಏರಿ ಬಂದಿದ್ದಾನಲ್ಲಾ. ಯಾವನು ಇವನನ್ನು ಕೊಂದುಬಿಡು ವನೋ ಅವನನ್ನು ಅರಸನು ಬಹಳ ಐಶ್ವರ್ಯ ವಂತನಾಗ ಮಾಡಿ ಅವನಿಗೆ ತನ್ನ ಮಗಳನ್ನು ಕೊಟ್ಟು ಅವನ ತಂದೆಯ ಮನೆಯನ್ನು ಇಸ್ರಾಯೇಲ್ಯರಲ್ಲಿ ಸರ್ವ ಮಾನ್ಯವನ್ನು ಕೊಡುವನು ಅಂದರು.
ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.
ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
ಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು.
ಈಗ ನೀನು ಬಾಬೆಲ್ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್ ಮೇಷಕ್ ಅಬೇದ್ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.
ಆದದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವದಕ್ಕೋಸ್ಕರ ಬಾಬೆಲಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು.
ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು.
ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.
ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗ ಗಳ ಮೇಲೆ ಅಧಿಕಾರಿಗಳನ್ನು ಇರಿಸಿದನು.