ಕೊರತೆ ಯಿಂದಲೂ ಬರದಿಂದಲೂ ಒಂಟಿಗರಾಗಿ ಪೂರ್ವ ದಲ್ಲಿ ಹಾಳೂ ಬೈಲೂ ಆದ ಅರಣ್ಯಕ್ಕೆ ಓಡುತ್ತಾರೆ;
TSK
TSK · ದಾನಿಯೇಲನು 5:21
مراجع Treasury of Scripture Knowledge في Kannada KJV.
ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.
ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.
ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.