TSK

TSK · ದಾನಿಯೇಲನು 8:13

مراجع Treasury of Scripture Knowledge في Kannada KJV.

العودة إلى المقطع

ಆದರೆ ಕರ್ತನ ದೂತನು ಅವನಿಗೆ--ನನ್ನ ಹೆಸರು ಏನೆಂದು ನೀನು ಕೇಳುವದೇನು? ಆ ಹೆಸರು ರಹಸ್ಯವಾದದ್ದು ಅಂದನು.

ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.

ನನ್ನ ಹಾಸಿಗೆಯಲ್ಲಿ ಉಂಟಾದ ನನ್ನ ಮನಸ್ಸಿನ ದರ್ಶನಗಳು--ನಾನು ನೋಡಲಾಗಿ ಇಗೋ, ಭೂಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.

ಆಗ ಪಾಲಕನು ಮತ್ತು ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದು ಬಂದು--ಮರವನ್ನು ಕಡಿದು ನಾಶಮಾಡಿರಿ; ಆದರೆ ಅದರ ಬೇರಿನ ಮೋಟನ್ನು ಕಬ್ಬಿಣ ಮತ್ತು ಕಂಚುಗಳ ಕಟ್ಟುಳ್ಳದ್ದಾಗಿ ಭೂಮಿಯಲ್ಲಿಯೂ ಬಯಲಿನ ಎಳೇ ಹುಲ್ಲಿನಲ್ಲಿಯೂ ಬಿಡಿರಿ. ಅದು ಆಕಾಶದ ಮಂಜಿನಿಂದ ತೇವವಾಗಲಿ; ಏಳು ಕಾಲಗಳು ಕಳೆಯುವ ತನಕ ಅದರ ಪಾಲು ಕಾಡು ಮೃಗಗಳ ಸಹವಾಸದ ಗತಿಯಂತೆ ಬರಲಿ ಎಂದು ಸಾರುವದನ್ನು ಅರಸನಾದ ನೀನು ನೋಡಿದೆಯಲ್ಲಾ.

ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು.

ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.

ಆಗ ದಾನಿಯೇಲನೆಂಬ ನಾನು ನೋಡಿದೆನು; ಇಗೋ, ಬೇರೆ ಇಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ ಮತ್ತೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು.

ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.

ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು--ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು--ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು.

ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.

ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)

ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.

ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.

ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.

ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.

ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.