TSK

TSK · ಆದಿಕಾಂಡ 25:21

مراجع Treasury of Scripture Knowledge في Kannada KJV.

العودة إلى المقطع

ಆದರೆ ಸಾರಯಳು ಬಂಜೆ ಯಾದದ್ದರಿಂದ ಮಕ್ಕಳಿಲ್ಲದೆ ಇದ್ದಳು.

ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.

ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು.

ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.

ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.

ಆದದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ಆತನು ನಮ್ಮ ವಿಜ್ಞಾಪನೆಯನ್ನು ಕೇಳಿದನು.

ಪ್ರಾರ್ಥನೆಯನ್ನು ಕೇಳು ವಾತನೇ, ನಿನ್ನ ಬಳಿಗೆ ಎಲ್ಲಾ ಜನರು ಬರುವರು.

ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.

ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,

ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.

ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ಒಬ್ಬನಿಂದ ಅಂದರೆ ನಮ್ಮ ಪಿತೃವಾದ ಇಸಾಕನಿಂದ ಗರ್ಭಿಣಿಯಾದಾಗ