ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.
TSK
TSK · ಆದಿಕಾಂಡ 7:21
مراجع Treasury of Scripture Knowledge في Kannada KJV.
ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.
ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.
ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.
ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.