ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್.
TSK
TSK · ಯೆಶಾಯ 21:2
مراجع Treasury of Scripture Knowledge في Kannada KJV.
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.
ಸುವಿವೇಕವು ದಯಾ ಸ್ಪದವು; ದೋಷಕರ ಮಾರ್ಗವು ಕಠಿಣವಾಗಿದೆ.
ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.
ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿ ಗೊಂಡಿದೆ. ಅವರು ಉತ್ಸಾಹಧ್ವನಿಯನ್ನು ಎತ್ತುತ್ತಾರೆ.
ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ
ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ- ಇಗೋ, ನಾನು ಏಲಾಮಿನ ಬಿಲ್ಲನ್ನೂ ಅವರ ಪರಾ ಕ್ರಮವನ್ನೂ ಶ್ರೇಷ್ಠತ್ವವನ್ನೂ ಮುರಿಯುತ್ತೇನೆ.
ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.
ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
ನಾನು ಬಾಬೆಲಿನಲ್ಲಿರುವ ಬೇಲ್ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.
ಬಾಬೆಲ್ ಆಕಾಶಕ್ಕೆ ಏರಿದರೂ ಅದರ ಬಲದ ಉನ್ನತ ಸ್ಥಾನವನ್ನು ಭದ್ರಮಾಡಿದರೂ ಸೂರೆಮಾಡು ವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.
ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು ಏನಂದರೆ ಮೇದ್ಯಯದ ಮತ್ತು ಪಾರಸಿಯರ ಅರಸರು ಗಳು.
ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.