TSK

TSK · ಯೋಹಾನನು 14:21

مراجع Treasury of Scripture Knowledge في Kannada KJV.

العودة إلى المقطع

ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.

ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ

ಅವನು ಕರ್ತನನ್ನು ಹಿಂಬಾಲಿಸುವದನ್ನು ಬಿಟ್ಟುಬಿಡದೆ ಆತನಿಗೆ ಹೊಂದಿಕೊಂಡು ಕರ್ತನು ಮೋಶೆಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಕೈಕೊಂಡನು.

ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ.

ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.

ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.

ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು.

ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ.

ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು.

ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.

ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು.

ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.

ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.

ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.

ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.

ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.

ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.

ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.

ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.