TSK

TSK · ಯೋಹಾನನು 5:39

مراجع Treasury of Scripture Knowledge في Kannada KJV.

العودة إلى المقطع

ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು.

ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.

ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.

ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.

ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.

ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.

ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.

ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.

ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?

ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು.

ಆತನು ಪ್ರತ್ಯುತ್ತರವಾಗಿ ಅವರಿಗೆ--ಮೋಶೆಯು ನಿಮಗೆ ಏನು ಅಪ್ಪಣೆ ಕೊಟ್ಟನು ಎಂದು ಕೇಳಿದನು.

ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.

ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.

ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.

ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.

ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.

ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.

ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.

ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು.

ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು

ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.

ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.

ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.

ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ