ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.
TSK
TSK · ಯೋಹಾನನು 9:39
مراجع Treasury of Scripture Knowledge في Kannada KJV.
ಕಿವುಡರೇ, ಕೇಳಿರಿ; ಕುರುಡರೇ ನೀವು ದೃಷ್ಟಿಸಿ ನೋಡಿರಿ.
ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು.
ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;
ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ.
ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು.
ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.