TSK

TSK · ಯಾಜಕಕಾಂಡ 21:22

مراجع Treasury of Scripture Knowledge في Kannada KJV.

العودة إلى المقطع

ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.

ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು.

ಅದರಂತೆಯೇ ಅತಿಕ್ರಮ ಬಲಿಯ ನಿಯಮವು ಇದೇ: ಇದು ಅತಿ ಪರಿಶುದ್ಧ ವಾದದ್ದು.

ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು.

ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.

ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.

ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್‌ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.

ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ.

ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು.