ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
TSK
TSK · ಲೂಕನು 21:22
مراجع Treasury of Scripture Knowledge في Kannada KJV.
ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?
ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.
ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.
ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.
ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.
ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.
ಇಗೋ, ಕರ್ತನ ದಿನವು ಬರುತ್ತದೆ.
ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು.
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.