TSK

TSK · ಮತ್ತಾಯನು 1:21

مراجع Treasury of Scripture Knowledge في Kannada KJV.

العودة إلى المقطع

ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.

ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.

ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು.

ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.

ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.

ಚೀಯೋನ್‌ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.

ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.

ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.

ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.

ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.

ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.

ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.

ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.

ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.

ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.

ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.