ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
TSK
TSK · ಮತ್ತಾಯನು 21:32
مراجع Treasury of Scripture Knowledge في Kannada KJV.
ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ.
ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ಆಗ ಇಗೋ, ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕೂತು ಕೊಂಡಿದ್ದಾನೆಂದು ಒಬ್ಬ ಪಾಪಿಯಾದ ಸ್ತ್ರೀಯು ತಿಳಿದು ಸುಗಂಧತೈಲದ ಭರಣಿಯನ್ನು ತಂದು
ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.
ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.