TSK

TSK · ಅರಣ್ಯಕಾಂಡ 10:21

مراجع Treasury of Scripture Knowledge في Kannada KJV.

العودة إلى المقطع

ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.

ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು.

ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.

ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.

ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.