ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು.
TSK
TSK · ಅರಣ್ಯಕಾಂಡ 21:23
مراجع Treasury of Scripture Knowledge في Kannada KJV.
ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.
ಯೊರ್ದನಿನ ಈಚೆಯಲ್ಲಿ ಬೇತ್ಪೇಯೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸ ಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ನುಡಿದ ಸಾಕ್ಷಿಗಳೂ ನಿಯಮಗಳೂ ನ್ಯಾಯಗಳೂ ಇವೇ. ಆ ಸೀಹೋನನನ್ನು ಮೋಶೆಯೂ ಇಸ್ರಾ ಯೇಲ್ ಮಕ್ಕಳೂ ಐಗುಪ್ತದೊಳಗಿಂದ ಹೊರಟ ಮೇಲೆ ಹೊಡೆದರು.
ಆದರೆ ಸೀಹೋ ನನು ತನ್ನ ಮೇರೆಯನ್ನು ದಾಟುವದಕ್ಕೆ ಇಸ್ರಾಯೇಲನ್ನು ನಂಬದೆ ತನ್ನ ಜನವನ್ನೆಲ್ಲಾ ಕೂಡಿಸಿ ಯಹಚಿನಲ್ಲಿ ದಂಡಿಳಿದು ಇಸ್ರಾಯೇಲಿಗೆ ವಿರೋಧವಾಗಿ ಯುದ್ಧ ಮಾಡಿದನು.
ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್ನ ನೀರುಗಳು ಸಹ ಹಾಳಾದವು.