ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.
TSK
TSK · ಅರಣ್ಯಕಾಂಡ 23:21
مراجع Treasury of Scripture Knowledge في Kannada KJV.
ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.
ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
ಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು.
ಆಗ ಗಿದ್ಯೋನನು ಅವನಿಗೆ--ನನ್ನ ಕರ್ತನೇ, ಕರ್ತನು ನಮ್ಮ ಸಂಗಡ ಇದ್ದರೆ ಇದೆಲ್ಲಾ ನಮಗೆ ಸಂಭವಿಸಿದ್ದೇನು? ಕರ್ತನು ನಮ್ಮನ್ನು ಐಗುಪ್ತದಿಂದ ಬರಮಾಡಲಿಲ್ಲವೋ ಎಂದು ನಮ್ಮ ತಂದೆಗಳು ನಮಗೆ ವಿವರಿಸಿ ಹೇಳಿದ ಆತನ ಅದ್ಭುತಗಳೆಲ್ಲಾ ಎಲ್ಲಿ? ಈಗ ಕರ್ತನು ನಮ್ಮನ್ನು ಕೈಬಿಟ್ಟು ಮಿದ್ಯಾನ್ಯರ ಕೈಗೆ ಒಪ್ಪಿಸಿ ದ್ದಾನೆ ಅಂದನು.
ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.
ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು.
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.
ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ.
ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.
ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು.
ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.
ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.
ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--
ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.