ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
TSK
TSK · ಙ್ಞಾನೋಕ್ತಿಗಳು 10:2
مراجع Treasury of Scripture Knowledge في Kannada KJV.
ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು.
ಇವರು ವಿಧವೆಯರನ್ನು ಸೂರೆಮಾಡಿ ದಿಕ್ಕಿಲ್ಲದವರಿಂದ ಸುಲುಕೊಂಡು ದೀನರಿಗೆ ನ್ಯಾಯ ವನ್ನು ತಪ್ಪಿಸಿ ನನ್ನ ಬಡ ಜನರ ನ್ಯಾಯವನ್ನು ತೆಗೆಯ ಬೇಕೆಂದಿದ್ದಾರೆ.
ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.