TSK

TSK · ಙ್ಞಾನೋಕ್ತಿಗಳು 10:3

مراجع Treasury of Scripture Knowledge في Kannada KJV.

العودة إلى المقطع

ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು.

ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.

ಅವನ ಮನೆಯ ಆದಾಯವು ತೊಲಗಿ ಹೋಗುವದು; ಅವನ ಕೋಪದ ದಿವಸದಲ್ಲಿ ಅದು ಕರಗಿ ಹೋಗುವದು.

ಇದರಿಂದ ಅವರ ಪ್ರಾಣವನ್ನು ಮರಣದಿಂದ ಬಿಡಿಸಿ ಬರಗಾಲ ದಲ್ಲಿ ಅವರ ಜೀವವನ್ನು ಕಾಪಾಡುತ್ತಾನೆ.

ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.

ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.

ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.

ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.

ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.

ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.

ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.