TSK

TSK · ಙ್ಞಾನೋಕ್ತಿಗಳು 11:19

مراجع Treasury of Scripture Knowledge في Kannada KJV.

العودة إلى المقطع

ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು.

ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.

ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.

ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.

ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ.

ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.

ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.

ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.