ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ,
TSK
TSK · ಙ್ಞಾನೋಕ್ತಿಗಳು 14:21
مراجع Treasury of Scripture Knowledge في Kannada KJV.
ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.
ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.
ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.
ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.
ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ?