ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
TSK
TSK · ಙ್ಞಾನೋಕ್ತಿಗಳು 15:27
مراجع Treasury of Scripture Knowledge في Kannada KJV.
ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.
ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.
ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.
ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಜ್ಞಾನವುಳ್ಳ ಹೃದಯದವನಿಗೆ ಅವಿವೇಕಿಯು ಸೇವಕನಾಗಿರುವನು.
ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.
ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ!
ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!