TSK

TSK · ಙ್ಞಾನೋಕ್ತಿಗಳು 28:13

مراجع Treasury of Scripture Knowledge في Kannada KJV.

العودة إلى المقطع

ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.

ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ--ನಾನು ನಿಮ್ಮ ದೇವ ರಾದ ಕರ್ತನಿಗೂ ನಿಮಗೂ ವಿರೋಧವಾಗಿ ಪಾಪ ಮಾಡಿದ್ದೇನೆ.

ಇಸ್ರಾಯೇಲ್‌ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು.

ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.

ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.

ಅವನು--ನಿನ್ನ ಮನೆಯಲ್ಲಿ ಅವರು ಏನು ನೋಡಿದರು ಅಂದನು. ಹಿಜ್ಕೀಯನು--ನನ್ನ ಮನೆಯಲ್ಲಿ ಇದ್ದ ಎಲ್ಲವನ್ನೂ ಅವರು ನೋಡಿದ್ದಾರೆ; ನನ್ನ ಬೊಕ್ಕಸಗಳಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇಲ್ಲ ಅಂದನು.

ಆಗ ಎಲಾಮನ ಕುಮಾರರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕೆನ್ಯನು ಎಜ್ರನಿಗೆ ಪ್ರತ್ತ್ಯುತ್ತರವಾಗಿ--ನಾವು ದೇಶದ ಜನಗಳಲ್ಲಿ ಅನ್ಯ ಸ್ತ್ರೀಯರನ್ನು ತೆಗೆದು ಕೊಂಡದ್ದರಿಂದ ನಮ್ಮ ದೇವರಿಗೆ ವಿರೋಧವಾಗಿ ಅಕೃತ್ಯಮಾಡಿದ್ದೇವೆ. ಆದಾಗ್ಯೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲ್ಯರಲ್ಲಿ ನಿರೀಕ್ಷೆ ಉಂಟು.

ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;

ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.

ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.

ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.

ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.

ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.

ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.

ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು.

ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.

ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.