TSK

TSK · ಙ್ಞಾನೋಕ್ತಿಗಳು 28:15

مراجع Treasury of Scripture Knowledge في Kannada KJV.

العودة إلى المقطع

ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.

ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.

ಆಗ ಮೆನಹೇಮನು ತಿಪ್ಸಹನ್ನೂ ಅದರಲ್ಲಿ ಇದ್ದ ಎಲ್ಲರನ್ನೂ ತಿರ್ಚ ಮೊದಲುಗೊಂಡು ಅದರ ಮೇರೆಗಳನ್ನೂ ಹಾಳುಮಾಡಿದನು. ಅವರು ತಮ್ಮ ಬಾಗಲುಗಳನ್ನು ತನಗೆ ತೆರೆಯದೆ ಇದ್ದದರಿಂದ ಅವರನ್ನು ಹೊಡೆದನು; ಅದರಲ್ಲಿರುವ ಗರ್ಭಿಣಿಯರನ್ನೆಲ್ಲಾ ಸೀಳಿಸಿದನು.

ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.

ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.

ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ

ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.

ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.

ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.