ಮನು ಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ ನ್ಯಾಯಾಧಿಪತಿಗಳು ಅವನಿಗೆ ನ್ಯಾಯತೀರಿಸುವರು.ಒಬ್ಬನು ಕರ್ತನಿಗೆ ವಿರೋಧವಾಗಿ ಪಾಪಮಾಡಿದರೆ ಅವನಿಗೋಸ್ಕರ ಪ್ರಾರ್ಥನೆ ಮಾಡತಕ್ಕವನು ಯಾರು ಅಂದನು. ಆದರೆ ಕರ್ತನು ಅವರನ್ನು ಕೊಂದುಹಾಕ ಬೇಕೆಂದಿದ್ದನಷ್ಟೆ, ಅವರು ತಮ್ಮ ತಂದೆಯ ಮಾತನ್ನು ಕೇಳದೆಹೋದರು.
TSK
TSK · ಙ್ಞಾನೋಕ್ತಿಗಳು 29:1
مراجع Treasury of Scripture Knowledge في Kannada KJV.
ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.
ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು.
ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು.
ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.
ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
ಆದದ ರಿಂದ ಅವನಿಗೆ ತಕ್ಷಣವೇ ವಿಪತ್ತು ಬರುವದು; ತಕ್ಷ ಣವೇ ಯಾವ ಪರಿಹಾರವಿಲ್ಲದೆ ಅವನು ಮುರಿಯಲ್ಪ ಡುವನು.
ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು.
ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ!
ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.
ನೀನು ಹೋಗಿ ಯೆಹೂದದ ಮನುಷ್ಯರಿಗೂ ಯೆರೂಸಲೇ ಮಿನ ನಿವಾಸಿಗಳಿಗೂ ಹೇಳತಕ್ಕದ್ದೇನಂದರೆ--ನೀವು ನನ್ನ ವಾಕ್ಯಗಳನ್ನು ಕೇಳುವ ಹಾಗೆ ಶಿಕ್ಷಣ ತಕ್ಕೊಳ್ಳು ವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.
ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.
ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.