ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.
TSK
TSK · ಙ್ಞಾನೋಕ್ತಿಗಳು 30:9
مراجع Treasury of Scripture Knowledge في Kannada KJV.
ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ
ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.
ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ,
ಹಸಿದಾಗ ಕಳ್ಳನು ತನ್ನ ಪ್ರಾಣವನ್ನು ತೃಪ್ತಿಪಡಿಸುವದಕ್ಕೆ ಕಳವು ಮಾಡಿದರೆ ಜನರು ಅವನನ್ನು ಹೀಯಾಳಿಸುವದಿಲ್ಲ.
ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.
ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.