ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
TSK
TSK · ಙ್ಞಾನೋಕ್ತಿಗಳು 9:8
مراجع Treasury of Scripture Knowledge في Kannada KJV.
ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
ಆಗ ಅರಸನಾದ ದಾವೀದನು--ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ ಅಂದನು.
ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು.
ಬುದ್ಧಿ ಹೀನನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ಜ್ಞಾನವನ್ನು ಅವನು ತಿರಸ್ಕರಿಸುವನು.
ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.
ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.