TSK

TSK · ರೋಮಾಪುರದವರಿಗೆ 6:21

مراجع Treasury of Scripture Knowledge في Kannada KJV.

العودة إلى المقطع

ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಆ ಸಾಯತಕ್ಕವನು ಸಾಯಬೇಕು; ಒಬ್ಬನ ಸಾಕ್ಷಿಯ ಮಾತಿನಿಂದ ಅವನು ಸಾಯಬಾರದು.

ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.

ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.

ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.

ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.

ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.

ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ.

ಆದದರಿಂದ ಮಳೆ ನಿಂತು ಹೋಯಿತು, ಹಿಂಗಾರೂ ಆಗಲಿಲ್ಲ; ಸೂಳೆಯ ಹಣೆ ನಿನಗಿತ್ತು; ನಾಚುವದನ್ನು ನಿರಾಕರಿಸಿದಿ.

ಗೋಧಿಯನ್ನು ಬಿತ್ತಿ, ಮುಳ್ಳು ಗಳನ್ನು ಕೊಯ್ಯುವರು; ಕಷ್ಟಪಟ್ಟರೂ ಪ್ರಯೋಜನ ವಾಗುವದಿಲ್ಲ; ಕರ್ತನ ಕೋಪದ ಉರಿಯಿಂದ ನಿಮ್ಮ ಬೆಳೆಯ ವಿಷಯವಾಗಿ ನಾಚಿಕೆಪಡುವಿರಿ.

ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು.

ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.

ಅವರು ಮಾಡಿದ್ದಕ್ಕಾಗಿ ನಾಚಿಕೆಪಟ್ಟರೆ ಮನೆಯ ರೂಪವನ್ನೂ ಆಕಾರವನ್ನೂ ಹೊರಡೋಣ ಬರೋಣಗಳನ್ನು ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ನ್ಯಾಯಪ್ರಮಾಣ ಗಳನ್ನ್ನೂ ಅವರಿಗೆ ತೋರಿಸು; ಅದರ ಎಲ್ಲಾ ನಿಯಮ ಗಳನ್ನೂ ಕೈಗೊಂಡು ಅವರು ಅವುಗಳನ್ನು ಮಾಡುವ ಹಾಗೆ ಅವರ ದೃಷ್ಟಿಯಲ್ಲಿಯೇ ಅವುಗಳನ್ನು ಬರೆ,

ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.

ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.

ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು.

ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.

ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.

ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.

ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.

ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?

ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.