‘ಮೂರು ವರ್ಷಗಳ ವರೆಗೆ ಬರಗಾಲ ಉಂಟಾಗಬೇಕೋ, ಇಲ್ಲವೆ ನೀನು ಮೂರು ತಿಂಗಳು ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ, ಇಲ್ಲವೆ ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರದೂತನಿಂದ ಉಂಟಾಗುವ ಮೂರು ದಿನಗಳ ಘೋರವ್ಯಾಧಿಯ ರೂಪವಾದ ಯೆಹೋವನ ಶಿಕ್ಷೆ ಬೇಕೋ, ಈ ಮೂರರಲ್ಲಿ ಒಂದನ್ನು ಆರಿಸಿಕೊ’ ಎಂಬುದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು ಆಲೋಚಿಸಿ ಹೇಳು” ಎಂದು ಹೇಳಿದನು.