ದಾವೀದನು ಯೋವಾಬನನ್ನೂ ಮತ್ತು ಜನಾಧಿಪತಿಗಳನ್ನೂ ಕರೆದು, “ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ, ಇಸ್ರಾಯೇಲರನ್ನು ಲೆಕ್ಕ ಮಾಡಿಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.