ಆಗ ಸಮುವೇಲನು, “ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.
TSK
TSK · 1 ಪೂರ್ವಕಾಲವೃತ್ತಾ 21:8
Treasury of Scripture Knowledge references in ಕನ್ನಡ IRV.
¶ ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.
¶ ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.
ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.
¶ ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.
ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.
¶ ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.