ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.
TSK
TSK · 1 ಅರಸುಗಳು 21:13
Treasury of Scripture Knowledge references in ಕನ್ನಡ IRV.
ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡಿದುಕೊಂಡುಹೋಗಿ ಕಲ್ಲೆಸೆದು ಕೊಂದರು.
ತರುವಾಯ ಜನರೆಲ್ಲರೂ ಕೈಹಾಕಲಿ, ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.
ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.
ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ಕರೆತಂದು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
ಯೆಹೋವನು ಅಹಾಬನಿಗೆ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ, ಯೆಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಬಿಸಾಡು” ಎಂದು ಹೇಳಿದನು.
ಆದರೆ ನಿನ್ನ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸದೇ ಬಿಡುವನೇ?” ಎಂದನು.
ನಾನು ಹಣಕೊಡದೆ ಅದರ ಸಾರವನ್ನು ಅನುಭವಿಸಿ, ಅದರ ದಣಿಗಳ ಪ್ರಾಣ ಹಾನಿಗೆ ಕಾರಣನಾಗಿದ್ದರೆ,
ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.
ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.
ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು, ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವುದು.
¶ ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.
ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು ತಮ್ಮ ಅರಸನನ್ನೂ, ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಅನೇಕರು ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ.
ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು.
¶ ಆದರೆ ಅವರು ಮಹಾಶಬ್ದದಿಂದ ಕೂಗಿ, ಕಿವಿಗಳನ್ನು ಮುಚ್ಚಿಕೊಂಡು, ಒಟ್ಟಾಗಿ ಅವನ ಮೇಲೆ ಬಿದ್ದು,