ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.
TSK
TSK · 2 ಪೂರ್ವಕಾಲವೃತ್ತಾ 21:11
Treasury of Scripture Knowledge references in ಕನ್ನಡ IRV.
ಆಗ ನಾನು ಆ ಮನುಷ್ಯನಿಗೂ ಮತ್ತು ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆ ಮಾಡಿದವರೆಲ್ಲರನ್ನು ಕುಲದಿಂದ ತೆಗೆದುಹಾಕುವೆನು.
¶ ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.
ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.
ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.
ಇಸ್ರಾಯೇಲ್ ರಾಜರ ಮಾರ್ಗದಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಪ್ರೇರೇಪಿಸಿರುವೆ; ಮತ್ತು ನಿನ್ನ ತಂದೆಯ ಕುಂಟುಂಬದವರೂ ನಿನಗಿಂತ ಉತ್ತಮರೂ, ನಿನ್ನ ಸಹೋದರರನ್ನೂ ಕೊಂದು ಹಾಕಿರುವೆ.
ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ, ವಿಗ್ರಹಗಳಿಂದ ರೇಗಿಸಿದರು.
ಇವರೂ ಇವರ ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು” ಎಂದು ಯೆಹೋವನು ಹೇಳುತ್ತಾನೆ.
¶ “ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು, ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ವ್ಯಭಿಚಾರಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರಮಾಡಿದೆ, ಪ್ರತಿಯೊಬ್ಬನ ಸಂಗಡ ವ್ಯಭಿಚಾರಕ್ಕೆ ಒಳಗಾದೆ.
ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’
ನೀವು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.
ಇಸ್ರಾಯೇಲೇ, ನೀನು ವ್ಯಭಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಸೇರಬೇಡಿರಿ, ಬೇತ್ ಅವೆನಿಗೆ ಯಾತ್ರೆ ಹೋಗಬೇಡಿರಿ, “ಯೆಹೋವನ ಜೀವದಾಣೆ” ಎಂದು ಶಪಥ ಮಾಡಬಾರದು.
‘ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವನಿಗೆ ಕುಡಿಸಿ, ಅವನ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ!
ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, ತನ್ನನ್ನು ಆರಾಧಿಸದವರೆಲ್ಲರಿಗೂ ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.