ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.
TSK
TSK · 2 ಪೂರ್ವಕಾಲವೃತ್ತಾ 21:16
Treasury of Scripture Knowledge references in ಕನ್ನಡ IRV.
ಯೆಹೋವನು ಅವನಿಗೆ, “ನೀನು ಈ ರೀತಿಯಾಗಿ ಮಾಡಿ ನನ್ನ ವಿಧಿನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕನಿಗೆ ಕೊಡುವೆನು.
¶ ದೇವರು ಸೊಲೊಮೋನನಿಗೆ ವಿರೋಧವಾಗಿ ಎಬ್ಬಿಸಿದ ಎರಡನೆಯ ವೈರಿಯು ಎಲ್ಯಾದಾವನ ಮಗನಾದ ರೆಜೋನ್ ಎಂಬುವನು.
¶ ಯೆರೂಸಲೇಮಿನವರು ಯೆಹೋರಾಮನ ಮರಣದ ನಂತರ, ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.
ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.
¶ ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು.
ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.
ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?