ಮೋಶೆ ತನ್ನ ಮಾವನಿಗೆ, “ದೇವರ ನಡೆಸುವಿಕೆಯನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ.
TSK
TSK · 2 ಪೂರ್ವಕಾಲವೃತ್ತಾ 34:21
Treasury of Scripture Knowledge references in ಕನ್ನಡ IRV.
¶ ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:
ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ,
ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.
ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು” ಎಂದು ಇಸ್ರಾಯೇಲರ ಅರಸನನ್ನು ಬೇಡಿಕೊಂಡನು.
“ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.
ಆದುದರಿಂದ ಯೆಹೋವನು ಯೆಹೂದ ದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಕೋಪವುಳ್ಳವನಾಗಿ ಅವುಗಳನ್ನು ಭಯಭೀತಿಗೂ ನಿಂದೆಗೂ, ಪರಿಹಾಸ್ಯಗಳಿಗೂ ಗುರಿಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.
ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ” ಎಂದು ಆಜ್ಞಾಪಿಸಿದನು.
“ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.
¶ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು,
¶ ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,
ಯಾಕೆಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ.